2:39 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಯುವ ಮನಸ್ಸಿಗೆ ಬೆನ್ನುತಟ್ಟಿ ಪ್ರೋತ್ಸಾಹಿಸುವ ಪ್ರಥಮ ಚಿಕಿತ್ಸೆ ಹೆತ್ತವರಿಂದ ಸಿಗಬೇಕು: ಕೆನರಾ ಕಾಲೇಜು -ರಕ್ಷಕ ಶಿಕ್ಷಕ ಸಂಘದ ಸಭೆಯಲ್ಲಿ ಡಾ. ರಮೀಳಾ

08/11/2023, 23:43

ಮಂಗಳೂರು(reporterkarnataka.com): ಯುವ ಮನಸ್ಸಿಗೆ ಬೆನ್ನು ತಟ್ಟಿ ಪ್ರೋತ್ಸಾಹಿಸುವ ಹಾಗೂ ಪ್ರೀತಿಯನ್ನು ವ್ಯಕ್ತಪಡಿಸುವುದೇ ಮನೆಯಲ್ಲಿ ಹೆತ್ತವರಿಂದ ಸಿಗಬೇಕಾದ ಪ್ರಥಮ ಚಿಕಿತ್ಸೆ. ಮಕ್ಕಳ ಭಾವನೆಯನ್ನು ಅರ್ಥ ಮಾಡಿಕೊಳ್ಳುವ ತಾಳ್ಮೆ ಇರಬೇಕು ಎಂದು ರೋಶನಿ ನಿಲಯದ ಸ್ನಾತಕೋತ್ತರ ವಿಭಾಗದ ಮಾನಸಿಕ ಆರೋಗ್ಯ ತಜ್ಞೆ ಡಾ.ರಮೀಳಾ ಶೇಖರ್ ಹೇಳಿದರು.


ಅವರು ಕೆನರಾ ಕಾಲೇಜಿನ ಪ್ರಥಮ ಪದವಿ ವಿದ್ಯಾರ್ಥಿಗಳ ಹೆತ್ತವರ ಹಾಗೂ ಶಿಕ್ಷಕರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಕಾಲೇಜಿಗೆ ಕಾಲಿಟ್ಟಾಗ ವಿದ್ಯಾರ್ಥಿಗಳಿಗೆ ಸಿಗುವ ಹೊಸ ಸ್ವಾತಂತ್ರ್ಯ, ಅವಕಾಶ ಮತ್ತು ಮನೋಭಾವ ಎಲ್ಲವೂ ಈ ಹಂತದಲ್ಲಿ ಬದಲಾಗುತ್ತದೆ. ಸಂಬಂಧಗಳು ಗೆಳೆತನದಲ್ಲಿ ಮೌನಕ್ಕೆ ಶರಣಾಗುವವರಿದ್ದಾರೆ. ಅದು ಅವರ ವರ್ತನೆಯಿಂದ ತಿಳಿಯುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.
ಕಾಲೇಜಿನ ಸಂಚಾಲಕ ಎಂ.ಜಗನ್ನಾಥ ಕಾಮತ್ ಅಧ್ಯಕ್ಷತೆ ವಹಿಸಿದ್ದು ಹೆತ್ತವರಿಗೆ ಮಕ್ಕಳು ಆಸ್ತಿ ಇದ್ದಂತೆ. ಅವರನ್ನು ಚೆನ್ನಾಗಿ ಬೆಳೆಸಬೇಕು. ಹೆತ್ತವರು ಕೇವಲ ಹಣ ಸಂಪಾದನೆಯಲ್ಲಿ ಇದ್ದಾಗ ಮಕ್ಕಳ ಕಡೆಗೆ ಗಮನ ಕಡಿಮೆಯಾಗುತ್ತದೆ ಎಂದು ನುಡಿದರು.
ಪ್ರಾಂಶುಪಾಲೆ ಡಾ.ಪ್ರೇಮಲತಾ ಪ್ರಸ್ತಾವಿಸಿದರು. ಕಾಲೇಜಿನ ವ್ಯವಸ್ಥಾಪಕರಾದ ಕೆ.ಶಿವಾನಂದ ಶೆಣೈ,ಆಡಳಿತಾಧಿಕಾರಿ ಡಾ.ದೀಪ್ತಿ ನಾಯಕ್, ವಿಭಾಗಗಳ ಮುಖ್ಯಸ್ಥರುಗಳಾದ ದೇಜಮ್ಮ,
ಸಂಧ್ಯಾ ಬಿ., ಜಯ ಭಾರತಿ ಕೆ.ಪಿ. ಉಪಸ್ಥಿತರಿದ್ದರು.
ಹಿಂದಿ ವಿಭಾಗದ ಮುಖ್ಯಸ್ಥೆ ಡಾ. ಕಲ್ಪನಾ ಪ್ರಭು ಸ್ವಾಗತಿಸಿದರು. ಗಣಕ ವಿಜ್ಞಾನ ವಿಭಾಗದ ಪ್ರತಿಭಾ ಬಾಳಿಗ ವಂದಿಸಿದರು. ಕನ್ನಡ ವಿಭಾಗದ ಮುಖ್ಯಸ್ಥೆ ವಾಣಿ ಯು. ಎಸ್. ಕಾರ್ಯಕ್ರಮ ನಿರೂಪಿಸಿದರು. ರಕ್ಷಕ ಶಿಕ್ಷಕ ಸಂಘದ ಸದಸ್ಯರನ್ನು ಈ ಸಭೆಯಲ್ಲಿ ಆಯ್ಕೆ ಮಾಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು