4:04 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

ಯುವಜನರ ಉದ್ಯೋಗ, ಘನತೆಯ ಬದುಕಿಗಾಗಿ ನಡೆಯಲಿದೆ ಡಿವೈಎಫ್ಐ ರಾಜ್ಯ ಸಮ್ಮೇಳನ: ಮುನೀರ್ ಕಾಟಿಪಳ್ಳ

27/01/2024, 23:09

ಮಂಗಳೂರು(reporterkarnataka.com): ದೇಶದಲ್ಲಿಂದು ಯಾವತ್ತೂ ಕಂಡು ಕೇಳರಿಯದಷ್ಟು ನಿರುದ್ಯೋಗದ ಪ್ರಮಾಣ ಏರಿಕೆಯಾಗಿದೆ. ಈ ಬಗ್ಗೆ ಚರ್ಚಿಸಬೇಕಾಗಿದ್ದ ಯುವಜನತೆ ಬಿಜೆಪಿಯು ರಾಮ ಮಂದಿರದ ನಿರ್ಮಾಣದ ಹೆಸರಲ್ಲಿ ನಡೆಸುವ ಧರ್ಮ ರಾಜಕಾರಣದ ಚುನಾವಣೆ ಸಿದ್ದತೆಗೆ ಬಲಿಯಾಗುತ್ತಿದ್ದಾರೆ. ಕೇಂದ್ರ ಸರಕಾರದ ಯುವಜನ ವಿರೋಧಿ ನೀತಿಗಳ ವಿರುದ್ಧ ಡಿವೈಎಫ್ಐ ದೇಶವ್ಯಾಪಿಯಲ್ಲಿ ನಿರುದ್ಯೋಗದ ವಿರುದ್ಧ ಹೋರಾಟ ಸಂಘಟಿಸುತ್ತಿದ್ದು ಕರ್ನಾಟಕ ರಾಜ್ಯದಲ್ಲೂ ಯುವಜನರ ಉದ್ಯೋಗ, ಘನತೆಯ ಬದುಕಿಗಾಗಿ 12 ನೇ ಕರ್ನಾಟಕ ರಾಜ್ಯ ಸಮ್ಮೇಳನವು ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯಲಿದೆ ಎಂದು ಡಿವೈಎಫ್ಐ ರಾಜ್ಯಾಧ್ಯಕ್ಷರಾದ ಮುನೀರ್ ಕಾಟಿಪಳ್ಳ ಹೇಳಿದರು.


ಡಿವೈಎಫ್ಐ ಬಜಾಲ್ ಪಕ್ಕಲಡ್ಕ ಘಟಕ ಆಯೋಜಿಸಿದ ರಾಜ್ಯ ಸಮ್ಮೇಳನದ ಸಿದ್ದತಾ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಸರ್ವರಿಗೂ ಶಿಕ್ಷಣ, ಉದ್ಯೋಗದ ಹಕ್ಕಿಗಾಗಿ ರಾಜ್ಯಾದ್ಯಂತ ಸುದೀರ್ಘವಾದ ಚಳುವಳಿಯನ್ನು ಕಟ್ಟಿದ ಡಿವೈಎಫ್ಐ ದ.ಕ. ಜಿಲ್ಲೆಯಲ್ಲಿ ಕೋಮುವಾದಿಗಳ ಅಟ್ಟಹಾಸದ ನಡುವೆಯೂ ಜನಪರ ಚಳುವಳಿಗಳನ್ನು ಮುನ್ನಡೆಸಿ ಗೆಲುವನ್ನು ಸಾಧಿಸಿದೆ. ಇತ್ತೀಚೆಗಿನ ಸುರತ್ಕಲ್ ಟೋಲ್ ಗೇಟ್ ವಿರುದ್ಧದ ಹೋರಾಟ ಐತಿಹಾಸಿಕ ಗೆಲುವನ್ನು ಸಾಧಿಸಿ ಈವರೆಗೆ ಸುಮಾರು 84 ಕೋಟಿಗಳಷ್ಟು ಹಣವನ್ನು ಜನರ ಜೇಬಿನಿಂದ ಸುಲಿಯುವ ಯೋಜನೆಗೆ ಅಂತ್ಯ ಇಟ್ಟಿದೆ. ಆರೋಗ್ಯದ ಪ್ರಶ್ನೆಯಲ್ಲಿ ಖಾಸಗೀ ಆಸ್ಪತ್ರೆಗಳ ಸುಲಿಗೆ ನೀತಿಯ ವಿರುದ್ಧವೂ ದಿನನಿತ್ಯದ ಮದ್ಯಪ್ರವೇಶವನ್ನು ಡಿವೈಎಫ್ಐ ಮುನ್ನಡೆಸುತ್ತಿದೆ. ಡಿವೈಎಫ್ಐ ನಡೆಸುವ ಚಳುವಳಿಯನ್ನು ಇನ್ನಷ್ಟು ಮುನ್ನಡೆಸಲು 12 ನೇ ಕರ್ನಾಟಕ ರಾಜ್ಯ ಸಮ್ಮೇಳನವು ಈ ಬಾರಿ ಮಂಗಳೂರಿನಲ್ಲಿ ನಡೆಯಲಿದ್ದು ಈ ಸಮ್ಮೇಳನದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳನ್ನು ಪ್ರತಿನಿಧಿಸಿ ಭಾಗವಹಿಸುವ ಪ್ರತಿನಿಧಿಗಳು ಯುವಜನರನ್ನು ಕಾಡುವ ಸಮಸ್ಯೆಗಳ ಬಗ್ಗೆ ಗಂಭೀರ ಚರ್ಚೆ ನಡೆಸಲಿದ್ದಾರೆ ಮತ್ತು ಯುವಜನ ವಿರೋಧಿ ನೀತಿಗಳನ್ನು ಜಾರಿಗೊಳಿಸುವ ಸರಕಾರಗಳ ವಿರುದ್ಧ ಹೋರಾಟಗಳನ್ನು ರೂಪಿಸಲಿದ್ದಾರೆ ಎಂದರು.
ವೇದಿಕೆಯಲ್ಲಿ ಡಿವೈಎಫ್ಐ ದ.ಕ. ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್, ಕಾರ್ಮಿಕ ಮುಖಂಡರಾದ ಜೆ ಬಾಲಕೃಷ್ಣ ಶೆಟ್ಟಿ, ಡಿವೈಎಫ್ಐ ಮಂಗಳೂರು ನಗರ ಅಧ್ಯಕ್ಷರಾದ ಜಗದೀಶ್ ಬಜಾಲ್ , ಬಜಾಲ್ ಘಟಕದ ಅಧ್ಯಕ್ಷರಾದ ದೀಕ್ಷಿತ್ ಭಂಡಾರಿ, ಕಾರ್ಯದರ್ಶಿ ಆನಂದ ಎನೆಲ್ಮಾರ್ ಉಪಸ್ಥಿತರಿದ್ದರು.
ಸಿದ್ದತಾ ಸಭೆಯ ನೇತೃತ್ವವನ್ನು ಡಿವೈಎಫ್ಐ ಸ್ಥಳೀಯ ಮುಖಂಡರಾದ ಧಿರಾಜ್ ಬಜಾಲ್, ಪ್ರಕಾಶ್ ಶೆಟ್ಟಿ, ದೀಪಕ್ ಬಜಾಲ್, ಕೃಷ್ಣ, ಪ್ರಿತೇಶ್ ಬಜಾಲ್, ಅಶೋಕ್ ಎನೆಲ್ಮಾರ್ , ನೂರುದ್ದೀನ್ ಪಕ್ಕಲಡ್ಕ ಮುಂತಾದವರು ವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು