10:58 PM Monday7 - July 2025
ಬ್ರೇಕಿಂಗ್ ನ್ಯೂಸ್
ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

ಇತ್ತೀಚಿನ ಸುದ್ದಿ

ಯುವಕರಿಗೆ ಸಂಸ್ಕೃತಿಯ ಅರಿವು ಮೂಡಿಸುವ ಕೆಲಸವಾಗಲಿ: ಎಡನೀರು ಶ್ರೀಗಳು

23/12/2024, 12:01

ಜಯಾನಂದ ಪೆರಾಜೆ ಪುತ್ತೂರು

info.reporterkarnataka@gmail.com

ಸಮಾಜದ ಮುಖ್ಯವಾಹಿನಿಯಾದ ಯುವ ಜನಾಂಗವು ಸಂಸ್ಕೃತಿಯಿಂದ ವಿಮುಖವಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ಹಿರಿಯರಿಗಿದೆ‌. ಹಿರಿಯರು ಯುವಕರಿಗೆ ನಮ್ಮ ಭಾರತೀಯ ಸಂಸ್ಕೃತಿಯ ಅರಿವು ಮೂಡಿಸಬೇಕು. ಇದರಿಂದ ಮರೆಯಾಗುತ್ತಿರುವ ಸಂಸ್ಕಾರಗಳನ್ನು ಮರುಕಳಿಸುವಂತೆ ಮಾಡಲು ಸಾಧ್ಯವೆಂದು ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಹೇಳಿದರು.
ಅವರು ಪುತ್ತೂರಿನ ಕಲ್ಲೇಗ ಭಾರತ ಮಾತಾ ಸಮುದಾಯ ಭವನದಲ್ಲಿ ಜರಗಿದ ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ತೃತೀಯ ವಾರ್ಷಿಕೋತ್ಸವವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಆಶೀರ್ವಚನ ನೀಡಿದರು.
ಪ್ರತಿಷ್ಠಾನದ ಗೌರವಾಧ್ಯಕ್ಷರಾದ ಪ್ರೊ ಎ.ವಿ. ನಾರಾಯಣ ಅಧ್ಯಕ್ಷತೆ ವಹಿಸಿದ್ದರು. ಮುಂಬೈ ವಿಶ್ವವಿದ್ಯಾನಿಲಯದ ಕನ್ನಡ ವಿಭಾಗದ ನಿವೃತ್ತ ಮುಖ್ಯಸ್ಥರಾದ ಡಾ. ವಸಂತಕುಮಾರ ತಾಳ್ತಜೆ ವಿಶೇಷ ಉಪನ್ಯಾಸ ನೀಡಿದರು. ಪುತ್ತೂರು ಮಹಾವೀರ ಆಸ್ಪತ್ರೆಯ ಡಾ. ಸುರೇಶ್ ಪುತ್ತೂರಾಯ ಹಿರಿಯರಿಗೆ ಆರೋಗ್ಯ ಸಲಹೆಗಳನ್ನು ನೀಡಿದರು.
*ಸನ್ಮಾನ ಮತ್ತು ಗೌರವಾರ್ಪಣೆ:* ಸಾಮಾಜಿಕ ಸೇವಾ ಕ್ಷೇತ್ರದಲ್ಲಿ ಅಪೂರ್ವ ಸಾಧನೆ ಮಾಡಿದ ಫರಂಗಿಪೇಟೆ ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೆ. ಕೃಷ್ಣಕುಮಾರ ಪೂಂಜ,ಕರ್ನಾಟಕ ಸರಕಾರದಿಂದ ಕನಕ ಪ್ರಶಸ್ತಿ ಪುರಸ್ಕೃತರಾದ ತಾಳ್ತಜೆ ವಸಂತಕುಮಾರ ಇವರನ್ನು ಸನ್ಮಾನಿಸಲಾಯಿತು.
ಪ್ರತಿಷ್ಠಾನದ ಗೌರವಾಧ್ಯಕ್ಷರಾದ ಪ್ರೂ ಎ. ವಿ. ನಾರಾಯಣ, ಸಾಮಾಜಿಕ ಕಾರ್ಯಕರ್ತರಾದ ಸಿ.ಎಚ್. ಬಾಲಕೃಷ್ಣ ಶೆಟ್ಟಿ ಮಂಗಳೂರು ಮತ್ತು ಪ್ರೇಮಲತಾ ಟಿ.ರಾವ್ ಪುತ್ತೂರು, ಮಹಾಬಲ ರೈ ಒಳತಡ್ಕ ಅವರನ್ನು ಗೌರವಿಸಲಾಯಿತು.

ಕೇಂದ್ರ ಸಮಿತಿ ಮತ್ತು ತಾಲೂಕು ಘಟಕಗಳ ನೂತನ ಪದಾಧಿಕಾರಿಗಳ ವಿವರವನ್ನು ಪ್ರಧಾನ ಕಾರ್ಯದರ್ಶಿ ದಿವಾಕರ ಆಚಾರ್ಯ ಗೇರುಕಟ್ಟೆ ನೀಡಿದರು.

ಸೇವಾ ಕೊಡುಗೆಗಳ ಹಸ್ತಾಂತರ : ಪ್ರತಿಷ್ಠಾನದ ಬಂಟ್ವಾಳ ಘಟಕದಿಂದ ಧೀರಜ್ ನಾಯ್ಕ್ ಪುಚ್ಛಕೆರೆ ಮಂಚಿ, ಗಣಪ ಪೂಜಾರಿ ಅಬ್ಬೆಟ್ಟು,ವಾಮನ ಪೂಜಾರಿ ಪರಂಗಿಪೇಟೆ, ಜಯರಾಮ ನಾಯ್ಕ ಮಾಣಿ ಮತ್ತು ಪುತ್ತೂರು ಘಟಕದಿಂದ ಹೊನ್ನಮ್ಮ ಬಲ್ನಾಡು ಇವರಿಗೆ ಆರ್ಥಿಕ ಸಹಾಯವನ್ನು ವಿತರಿಸಲಾಯಿತು.

ಸಂಚಾಲಕ ಭಾಸ್ಕರ ಬಾರ್ಯ, ಪುತ್ತೂರು ಘಟಕದ ಅಧ್ಯಕ್ಷ ಚಂದ್ರಶೇಖರ ಆಳ್ವ ಪಡುಮಲೆ, ಮಂಗಳೂರು ಘಟಕದ ಅಧ್ಯಕ್ಷ ಭರತ್.ಕೆ , ಬೆಳ್ತಂಗಡಿ ಘಟಕದ ಅಧ್ಯಕ್ಷ ಸೀತಾರಾಮ ಶೆಟ್ಟಿ ಉಜಿರೆ, ಬಂಟ್ವಾಳ ಘಟಕದ ಅಧ್ಯಕ್ಷ ಸುಬ್ರಾಯ ಮಡಿವಾಳ ಬಿ.ಸಿ ರೋಡು, ಪುತ್ತೂರು ಘಟಕದ ಜಿಲ್ಲಾ ಪ್ರತಿನಿಧಿ ಸಂಜೀವ ನಾಯಕ್ ಕಲ್ಲೇಗ, ಮಹಿಳಾ ಘಟಕದ ಸಂಚಾಲಕಿ ವತ್ಸಲಾ ರಾಜ್ನಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಪ್ರತಿಷ್ಠಾನದ ಟ್ರಸ್ಟಿಗಳಾದ ಲೋಕೇಶ್ ಹೆಗ್ಡೆ ಪುತ್ತೂರು, ಎಂ. ಜಯರಾಮ ಭಂಡಾರಿ ಧರ್ಮಸ್ಥಳ, ಅನಾರು ಕೃಷ್ಣಶರ್ಮ, ಪದಾಧಿಕಾರಿಗಳಾದ ಭವಾನಿ ಶಂಕರ ಶೆಟ್ಟಿ ಪುತ್ತೂರು, ಕೆ.ರಾಮಕೃಷ್ಣ ನಾಯಕ್ ಬಂಟ್ವಾಳ, ಜಯಾನಂದ ಪೆರಾಜೆ, ವಸಂತ ಸುವರ್ಣ ಬೆಳ್ತಂಗಡಿ, ಕೆ.ವಾರಿಜ ಬೆಳ್ತಂಗಡಿ, ಚಂಚಲಾಕ್ಷಿ ಪುತ್ತೂರು, ಪ್ರೊ ವಿ. ಜಿ ಭಟ್ ಪುತ್ತೂರು,ಪದ್ಮಯ್ಯ, ರಾಜಮಣಿ ರಾಮಕುಂಜ,ಗಣೇಶ್ ಭಟ್ ಬೆಳ್ತಂಗಡಿ, ಗುಂಡ್ಯಡ್ಕ ಈಶ್ವರ ಭಟ್ ವಿವಿಧ ಕಾರ್ಯಕ್ರಮಗಳನ್ನು ನಿರ್ವಹಿಸಿದರು.


ಪ್ರತಿಷ್ಠಾನದ ಅಧ್ಯಕ್ಷ ಕೈಯೂರು ನಾರಾಯಣ ಭಟ್ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಜೊತೆ ಕಾರ್ಯದರ್ಶಿ ಡಾ.ಬಿ. ಎನ್. ಮಹಾಲಿಂಗ ಭಟ್ ಅಭಿನಂದನಾ ನುಡಿಗಳನ್ನಾಡಿದರು. ಸಹ ಸಂಚಾಲಕ ಪ್ರೊ. ವೇದವ್ಯಾಸ ರಾಮಕುಂಜ ಪ್ರಾರ್ಥಿಸಿದರು.ಟ್ರಸ್ಟಿ ದುಗ್ಗಪ್ಪ ಎನ್ .ಪುತ್ತೂರು ವಂದಿಸಿದರು. ಟ್ರಸ್ಟಿ ಜಯರಾಮ ಪೂಜಾರಿ ಬಂಟ್ವಾಳ ಕಾರ್ಯಕ್ರಮ ನಿರೂಪಿಸಿದರು.
ಸಾಂಸ್ಕೃತಿಕ ಕಾರ್ಯಕ್ರಮವಾಗಿ ಭಾಸ್ಕರ ಬಾರ್ಯ ಸಂಯೋಜನೆಯಲ್ಲಿ ಹಿರಿಯರ ಸೇವಾ ಪ್ರತಿಷ್ಠಾನದ ಸದಸ್ಯರಿಂದ ಪಾರ್ಥಸಾರಥ್ಯ ತಾಳಮದ್ದಳೆ ಜರಗಿತು.

ಇತ್ತೀಚಿನ ಸುದ್ದಿ

ಜಾಹೀರಾತು