1:32 PM Wednesday24 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ಯುವತಿ ಆತ್ಮಹತ್ಯೆ ಯತ್ನಕ್ಕೆ ಪೊಲೀಸ್ ಇಲಾಖೆ ವೈಫಲ್ಯ ಕಾರಣ: ಶಾಸಕ ಡಾ. ಭರತ್ ಶೆಟ್ಟಿ ಆಕ್ರೋಶ

25/10/2024, 18:46

ಸುರತ್ಕಲ್(reporterkarnataka.com): ಸುರತ್ಕಲ್ ಇಡ್ಯಾದ ಯುವತಿಯೊಬ್ಬಳಿಗೆ ಫೇಸ್ಬುಕ್ ಮೆಸೆಂಜರ್ ಮೂಲಕ ಅಶ್ಲೀಲ ಮೆಸೇಜ್ ಕಳುಹಿಸಿ ತನ್ನೊಂದಿಗೆ ಬರದಿದ್ದರೆ 24 ತುಂಡು ಮಾಡಿ ಬಿಸಾಡುವೆ ಎಂದು ಬೆದರಿಕೆ ಹಾಕಿದ ಯುವಕನ ವಿರುದ್ಧ ಕ್ಷಿಪ್ರ ಕ್ರಮವನ್ನು ಪೊಲೀಸರು ಕೈಗೊಳ್ಳದೆ ಇದ್ದ ಪರಿಣಾಮ ಸಂತ್ರಸ್ತ ಯುವತಿ ಆತ್ಮಹತ್ಯೆಗೆ ಯತ್ನ ಮಾಡಿದ್ದಾಳೆ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ. ಆಕ್ರೋಶ ವ್ಯಕ್ತಪಡಿಸಿದ್ದಾರೆ
ಯುವತಿ ಕುಟುಂಬಸ್ಥರು ದೂರು ದಾಖಲಿಸುವ ಸಂದರ್ಭವೇ ನಿರ್ಲಕ್ಷವಾಗಿ ವರ್ತಿಸಿರುವ ಠಾಣಾ ಪೊಲೀಸರ ಕ್ರಮ ಖಂಡನೀಯ.
ಯುವತಿ ಇದೀಗ ಜೀವನ್ಮರಣದ ಸ್ಥಿತಿಯಲ್ಲಿದ್ದು ಇದರ ಜವಾಬ್ದಾರಿಯನ್ನು ಪೊಲೀಸರೇ ಹೊರಬೇಕು .
ನಾಗರಿಕರು ಸಹನೆ ಕಳೆದುಕೊಳ್ಳುವ ಮುನ್ನ, ಜಿಲ್ಲಾಡಳಿತ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ತಪ್ಪಿತಸ್ಥರನ್ನು ಬಂಧಿಸುವ ಮೂಲಕ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು