8:15 AM Thursday23 - July 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ…

ಇತ್ತೀಚಿನ ಸುದ್ದಿ

Ullala | ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ: ಆಟೋ ಚಾಲಕ ಸಹಿತ 3 ಮಂದಿ ಬಂಧನ

18/04/2025, 00:53

ಮಂಗಳೂರು(reporterkarnataka.com):
ನಗರದ ಹೊರವಲಯದ ಉಳ್ಳಾಲ ತಾಲೂಕಿನ ಮುನ್ನೂರು ಗ್ರಾಮದ ಕುತ್ತಾರು ಸಮೀಪದ ಬಂಗ್ಲೆ ಕೊಟ್ಟಾರಿಮೂಲೆ ಎಂಬಲ್ಲಿ ಯುವತಿಯೊಬ್ಬಳ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆಟೋರಿಕ್ಷಾ ಚಾಲಕ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ.
ಬಂಧಿತರನ್ನು ಆಟೋ ಚಾಲಕ ಪ್ರಭುರಾಜ್ (38), ಕುಂಪಲ ನಿವಾಸಿ ಮಿಥುನ್ (30) ಹಾಗೂ ಮಂಗಳೂರಿನಲ್ಲಿ ವಾಸ ಮಾಡುವ ಮಣಿ ಎಂದು ಗುರುತಿಸಲಾಗಿದೆ.
ಉತ್ತರ ಭಾರತ ಮೂಲದ ಯುವತಿಯನ್ನು ಕೊಟ್ಟಾರಿಮೂಲೆಯ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ. ಬಂಧಿತ ಆರೋಪಿಗಳಲ್ಲಿ
ಪ್ರಭುರಾಜ್ ಎಂಬಾತ ಮುಲ್ಕಿ ನಿವಾಸಿಯಾಗಿದ್ದು, 10 ವರ್ಷಕ್ಕಿಂತ ಹೆಚ್ಚು ಕಾಲ ಆಟೋ ಚಾಲಕನಾಗಿ ದುಡಿಯುತ್ತಿದ್ದಾನೆ. ಮಿಥುನ್ಎಂಬಾತ ಕುಂಪಲ ನಿವಾಸಿಯಾಗಿದ್ದು ಇಲೆಕ್ಟಿಷಿಯನ್ ಆಗಿ ಕಾರ್ಯನಿರ್ವಹಿಸುತ್ತಿದ್ದಾನೆ. ಮಣಿ ಮಂಗಳೂರಿನಲ್ಲಿ ವಾಸ ಮಾಡುತ್ತಿದ್ದಾನೆ.
ಗೆಳೆಯನ ಜೊತೆಗೆ ಮುನಿಸಿಕೊಂಡು ಬಂದ ಉತ್ತರ ಪ್ರದೇಶ ಮೂಲದ ಈ ಯುವತಿಗೆ ಮದ್ಯಪಾನ ಮಾಡಿಸಿ ಅತ್ಯಾಚಾರ ನಡೆಸಲಾಗಿದೆ ಎಂದು ತಿಳಿದು ಬಂದಿದೆ.
ಮುನ್ನೂರು ಗ್ರಾಮದ ರಾಜೇಶ್ ಎಂಬವರ ಮನೆಯ ಬಾಗಿಲು ಬಡಿದ ಸದ್ದು ಕೇಳಿಸಿ ಮನೆಯವರು ಹೊರಗೆ ಬಂದು ನೋಡಿದಾಗ ಯುವತಿಯೊಬ್ಬಳು ನಶೆಯಲ್ಲಿದ್ದು, ಕಣ್ಣೀರು ಹಾಕುತ್ತಲೇ ಮನೆಯವರ ಬಳಿ ನೀರು ಕೇಳಿದ್ದಾಳೆ. ನೀರು ಕೇಳಿದ ತಕ್ಷಣ ಆಕೆ ಪ್ರಜ್ಞೆ ತಪ್ಪಿದ್ದು, ಸೇರಿದ ಗ್ರಾಮಸ್ಥರು ತಕ್ಷಣ ಪೊಲೀಸರಿಗೆ ವಿಷಯ ತಿಳಿಸಿದ್ದು, ಪೊಲೀಸರು ಸ್ಥಳಕ್ಕೆ ಬಂದು ಯುವತಿಯನ್ನು ಆಸ್ಪತ್ರೆಗೆ ದಾಖಲಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು