6:11 PM Thursday10 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

Ullala | ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ: ಆಟೋ ಚಾಲಕ ಸಹಿತ 3 ಮಂದಿ ಬಂಧನ

18/04/2025, 00:53

ಮಂಗಳೂರು(reporterkarnataka.com):
ನಗರದ ಹೊರವಲಯದ ಉಳ್ಳಾಲ ತಾಲೂಕಿನ ಮುನ್ನೂರು ಗ್ರಾಮದ ಕುತ್ತಾರು ಸಮೀಪದ ಬಂಗ್ಲೆ ಕೊಟ್ಟಾರಿಮೂಲೆ ಎಂಬಲ್ಲಿ ಯುವತಿಯೊಬ್ಬಳ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆಟೋರಿಕ್ಷಾ ಚಾಲಕ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ.
ಬಂಧಿತರನ್ನು ಆಟೋ ಚಾಲಕ ಪ್ರಭುರಾಜ್ (38), ಕುಂಪಲ ನಿವಾಸಿ ಮಿಥುನ್ (30) ಹಾಗೂ ಮಂಗಳೂರಿನಲ್ಲಿ ವಾಸ ಮಾಡುವ ಮಣಿ ಎಂದು ಗುರುತಿಸಲಾಗಿದೆ.
ಉತ್ತರ ಭಾರತ ಮೂಲದ ಯುವತಿಯನ್ನು ಕೊಟ್ಟಾರಿಮೂಲೆಯ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ. ಬಂಧಿತ ಆರೋಪಿಗಳಲ್ಲಿ
ಪ್ರಭುರಾಜ್ ಎಂಬಾತ ಮುಲ್ಕಿ ನಿವಾಸಿಯಾಗಿದ್ದು, 10 ವರ್ಷಕ್ಕಿಂತ ಹೆಚ್ಚು ಕಾಲ ಆಟೋ ಚಾಲಕನಾಗಿ ದುಡಿಯುತ್ತಿದ್ದಾನೆ. ಮಿಥುನ್ಎಂಬಾತ ಕುಂಪಲ ನಿವಾಸಿಯಾಗಿದ್ದು ಇಲೆಕ್ಟಿಷಿಯನ್ ಆಗಿ ಕಾರ್ಯನಿರ್ವಹಿಸುತ್ತಿದ್ದಾನೆ. ಮಣಿ ಮಂಗಳೂರಿನಲ್ಲಿ ವಾಸ ಮಾಡುತ್ತಿದ್ದಾನೆ.
ಗೆಳೆಯನ ಜೊತೆಗೆ ಮುನಿಸಿಕೊಂಡು ಬಂದ ಉತ್ತರ ಪ್ರದೇಶ ಮೂಲದ ಈ ಯುವತಿಗೆ ಮದ್ಯಪಾನ ಮಾಡಿಸಿ ಅತ್ಯಾಚಾರ ನಡೆಸಲಾಗಿದೆ ಎಂದು ತಿಳಿದು ಬಂದಿದೆ.
ಮುನ್ನೂರು ಗ್ರಾಮದ ರಾಜೇಶ್ ಎಂಬವರ ಮನೆಯ ಬಾಗಿಲು ಬಡಿದ ಸದ್ದು ಕೇಳಿಸಿ ಮನೆಯವರು ಹೊರಗೆ ಬಂದು ನೋಡಿದಾಗ ಯುವತಿಯೊಬ್ಬಳು ನಶೆಯಲ್ಲಿದ್ದು, ಕಣ್ಣೀರು ಹಾಕುತ್ತಲೇ ಮನೆಯವರ ಬಳಿ ನೀರು ಕೇಳಿದ್ದಾಳೆ. ನೀರು ಕೇಳಿದ ತಕ್ಷಣ ಆಕೆ ಪ್ರಜ್ಞೆ ತಪ್ಪಿದ್ದು, ಸೇರಿದ ಗ್ರಾಮಸ್ಥರು ತಕ್ಷಣ ಪೊಲೀಸರಿಗೆ ವಿಷಯ ತಿಳಿಸಿದ್ದು, ಪೊಲೀಸರು ಸ್ಥಳಕ್ಕೆ ಬಂದು ಯುವತಿಯನ್ನು ಆಸ್ಪತ್ರೆಗೆ ದಾಖಲಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು