4:13 PM Sunday1 - February 2026
ಬ್ರೇಕಿಂಗ್ ನ್ಯೂಸ್
ಮೊದಲಿನಂತೆ ಸ್ವತಂತ್ರವಾಗಿ ಸಿನಿಮಾ ಮಾಡಲಾಗುತ್ತಿಲ್ಲ: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ಇಂದ್ರಿಯ ನಿಗ್ರಹಿಸುವುದೇ ನೈಜ ಜ್ಞಾನ; ಇದುವೇ ಜೀವನ ಮಾರ್ಗ : ಶೃಂಗೇರಿ ಶಾರದಾಪೀಠದ… ಗೃಹ ಸಚಿವರ ರಾಜೀನಾಮೆ, ಪೊಲೀಸ್ ಕಮೀಷನರ್ ಅಮಾನತಿಗೆ ಬಿಜೆಪಿ ಆಗ್ರಹ ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ಯುವವಾಹಿನಿ ಕಂಕನಾಡಿ ಘಟಕದ 2022-23ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ 

15/09/2022, 22:29

ಮಂಗಳೂರು(reporterkarnataka.com):ಯುವವಾಹಿನಿ ಕಂಕನಾಡಿ ಘಟಕದ 2022-23ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನಗರದ ಕಂಕನಾಡಿ ಗರೋಡಿ ಬಳಿಯ ಸಮೃದ್ಧಿ ಭವನದಲ್ಲಿ ಜರುಗಿತು.

ಕಾರ್ಯಕ್ರಮವನ್ನು ಉಜ್ಜೋಡಿ ಶ್ರೀ ಬ್ರಹ್ಮಮುಗೇರ ಮಹಾಂಕಾಳಿ ಸೇವಾ ಸಮಿತಿಯ ಅಧ್ಯಕ್ಷ ಉಮಾನಾಥ ಕೋಟ್ಯಾನ್ ಪದಗ್ರಹಣ ಉದ್ಘಾಟಿಸಿ ಮಾತನಾಡಿ, ಯುವವಾಹಿನಿ ಕೇಂದ್ರ ಸಮಿತಿಗೆ ಸರ್ಕಾರದಿಂದ ಸ್ವಂತ ನಿವೇಶನ ದೊರೆತಿರುವುದಕ್ಕೆ ಅಭಿನಂದಿಸಿದರು.

ಅತಿಥಿಗಳಾಗಿ ಆಗಮಿಸಿದ ಉದ್ಯಮಿ ಸಂತೋಷ್ ಕಾಮತ್ ಮಾತನಾಡಿ, ಯುವಕರು ವಿದ್ಯಾವಂತರಾಗಿ, ಪ್ರತಿಭಾವಂತರಾಗಿ, ಸ್ವಾವಲಂಬಿಗಳಾಗಿ ಧನಾತ್ಮಕವಾಗಿ ಚಿಂತನೆಗಳನ್ನು ಮಾಡುತ್ತಾ ಸಮಾಜದ ಬೇರೆ ಬೇರೆ ಕ್ಷೇತ್ರಗಳಲ್ಲಿ ಮುಂದೆ ಬಂದು ಸಾಧನೆ ಮಾಡುವಂತಾಗಬೇಕೆಂದು ಯುವಕರಿಗೆ ಕರೆ ನೀಡಿದರು.

ಘಟಕದ ಅಧ್ಯಕ್ಷೆ ನಯನ ಸುರೇಶ್ ಅಧ್ಯಕ್ಷತೆ ವಹಿಸಿದ್ದರು. ಘಟಕದ ಮಾಜಿ ಅಧ್ಯಕ್ಷ ಗೋಪಾಲ್.ಎಂ.ಪೂಜಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಘಟಕದ ಹಿರಿಯ ಸದಸ್ಯೆ ಪ್ರೇಮಾ ಪ್ರಾರ್ಥಿಸಿದರು. ಅಧ್ಯಕ್ಷೆ ನಯನಾ ಸುರೇಶ್ ಸ್ವಾಗತಿಸಿ, ಕಾರ್ಯದರ್ಶಿ ಲೋಕೇಶ್ ಅಮೀನ್ ಗತವರ್ಷದ ವರದಿ ನೀಡಿದರು. 

ಪ್ರಸ್ತುತ ಸಾಲಿನ ಚುನಾವಣಾ ಅಧಿಕಾರಿ, ಘಟಕದ ನಿಕಟ ಪೂರ್ವ ಅಧ್ಯಕ್ಷೆ ಸುಮಾ ವಸಂತ್  2022 – 23ನೇ ಸಾಲಿನ ನೂತನ ಪದಾಧಿಕಾರಿಗಳ ತಂಡವನ್ನು ವೇದಿಕೆಗೆ ಆಹ್ವಾನಿಸಿದರು.

ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಉದಯ ಅಮೀನ್ ಮಟ್ಟು ನೂತನ ಸಾಲಿನ ಪದಾಧಿಕಾರಿಗಳಿಗೆ ಪದ ಪ್ರದಾನ ಮಾಡಿ ಅಭಿನಂದಿಸಿದರು.

ನೂತನ ಅಧ್ಯಕ್ಷ  ಪೃಥ್ವಿರಾಜ್ ಅವರು ಮುಂದಿನ ದಿನಗಳಲ್ಲಿ ಉತ್ತಮ ಕೆಲಸ ಕಾರ್ಯಗಳನ್ನು ನಡೆಸಿಕೊಂಡು ಬರಲು ಎಲ್ಲರ ಸಹಕಾರ ಕೋರಿದರು. ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ  ರವಿ ಕೊಂಡಾಣ, ಕೇಂದ್ರ ಸಮಿತಿ ಮಾಜಿ ಅಧ್ಯಕ್ಷರು,ಪದಾಧಿಕಾರಿಗಳು, ವಿವಿಧ ಘಟಕಗಳ ಅಧ್ಯಕ್ಷರು ಹಾಗೂ ಸದಸ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

ನೂತನ ಕಾರ್ಯದರ್ಶಿ  ಸುರೇಖಾ ಮೋಹನ್ ವಂದಿಸಿ,ಘಟಕ ಸದಸ್ಯ ದೀಕ್ಷಿತ್ ಹಾಗೂ ತೃಪ್ತಿ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು