7:55 PM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಜೀ ಕನ್ನಡ ಡ್ರಾಮಾ ಜೂನಿಯರ್ಸ್ ವಿಜೇತೆ ರಿಷಿಕಾ ಕುಂದೇಶ್ವರಗೆ ಮುಖ್ಯಮಂತ್ರಿ ಮೆಚ್ಚುಗೆ

02/12/2024, 20:20

ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಜೀ ಕನ್ನಡ ಡ್ರಾಮಾ ಜೂನಿಯರ್ಸ್ ವಿಜೇತೆ ರಿಷಿಕಾ ಕುಂದೇಶ್ವರ,ಆಶೀರ್ವಾದ ಪಡೆದರು.

ಮುಖ್ಯಮಂತ್ರಿಗಳ ಮಾಧ್ಯಮ ಕಾರ್ಯದರ್ಶಿ ಕೆ ವಿ ಪ್ರಭಾಕರ ಅವರ ಆಹ್ವಾನದ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭಾನುವಾರ ಭೇಟಿ ಮಾಡಿದರು.
ರಿಷಿಕಾ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿ, ಭವಿಷ್ಯ ಉಜ್ವಲವಾಗಿರಲಿ ಎಂದು ಹಾರೈಸಿದರು.
ಈ ಸಂದರ್ಭದಲ್ಲಿ ಸಿಎಂ ಮಾಧ್ಯಮ ಕಾರ್ಯದರ್ಶಿ ಕೆ ವಿ ಪ್ರಭಾಕರ್, ಜಿತೇಂದ್ರ ಕುಂದೇಶ್ವರ ಇದ್ದರು.
*ಪ್ರೆಸ್ ಕ್ಲಬ್ ಗೌರವ:*
ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ವತಿಯಿಂದ ರಿಷಿಕಾ ಕುಂದೇಶ್ವರ ಅವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಸಿಎಂ ಮಾಧ್ಯಮ ಕಾರ್ಯದರ್ಶಿ ಕೆ. ವಿ. ಪ್ರಭಾಕರ, ವಸತಿ ಸಚಿವರ ಮಾಧ್ಯಮ ಕಾರ್ಯದರ್ಶಿ ಲಕ್ಷ್ಮಿ ನಾರಾಯಣ, ಬಹುರೂಪಿ ಸಂಸ್ಥೆಯ ಅಧ್ಯಕ್ಷ ಜಿ ಎನ್ ಮೋಹನ್, ಪ್ರಸಿದ್ಧ ಯಕ್ಷಗಾನ ಕಲಾವಿದ ಜಬ್ಬಾರ್ ಸುಮೋ , ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಪ್ರಧಾನ ಕಾರ್ಯದರ್ಶಿ ಲೋಕೇಶ್ ಜಿ., ಪ್ರೆಸ್ ಕ್ಲಬ್ ಅಧ್ಯಕ್ಷ ಶ್ರೀಧರ್, ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಬೆಳ್ಳಿತಟ್ಟೆ, ಪತ್ರಕರ್ತರ ಸಂಘದ ಉಪಾಧ್ಯಕ್ಷ ಭವಾನಿ ಸಿಂಗ್, ಕೋಶಾಧಿಕಾರಿ ವಾಸುದೇವ ಹೊಳ್ಳ ಇದ್ದರು.
*ಕನ್ನಡ ರಾಜ್ಯೋತ್ಸವ ಪ್ರಶಸ್ತಿ:* ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ ಸಭಾಮಂದಿರದಲ್ಲಿ ನಬಿ ರೋಷನ್ ಮತ್ತು ಶಾಫಿಯ ಪ್ರಕಾಶನ ವತಿಯಿಂದ ರಿಷಿಕಾ ಕುಂದೇಶ್ವರ ಅವರನ್ನು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಈ ಸಂದರ್ಭ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ, ಮಾಜಿ ಡಿಐಜಿಪಿ ರಾಜಪ್ಪ ಮತ್ತಿತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು