9:38 AM Sunday23 - August 2026
ಬ್ರೇಕಿಂಗ್ ನ್ಯೂಸ್
ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್…

ಇತ್ತೀಚಿನ ಸುದ್ದಿ

ಜೀ ಕನ್ನಡ ಡ್ರಾಮಾ ಜೂನಿಯರ್ಸ್ ವಿಜೇತೆ ರಿಷಿಕಾ ಕುಂದೇಶ್ವರಗೆ ಮುಖ್ಯಮಂತ್ರಿ ಮೆಚ್ಚುಗೆ

02/12/2024, 20:20

ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಜೀ ಕನ್ನಡ ಡ್ರಾಮಾ ಜೂನಿಯರ್ಸ್ ವಿಜೇತೆ ರಿಷಿಕಾ ಕುಂದೇಶ್ವರ,ಆಶೀರ್ವಾದ ಪಡೆದರು.

ಮುಖ್ಯಮಂತ್ರಿಗಳ ಮಾಧ್ಯಮ ಕಾರ್ಯದರ್ಶಿ ಕೆ ವಿ ಪ್ರಭಾಕರ ಅವರ ಆಹ್ವಾನದ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭಾನುವಾರ ಭೇಟಿ ಮಾಡಿದರು.
ರಿಷಿಕಾ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿ, ಭವಿಷ್ಯ ಉಜ್ವಲವಾಗಿರಲಿ ಎಂದು ಹಾರೈಸಿದರು.
ಈ ಸಂದರ್ಭದಲ್ಲಿ ಸಿಎಂ ಮಾಧ್ಯಮ ಕಾರ್ಯದರ್ಶಿ ಕೆ ವಿ ಪ್ರಭಾಕರ್, ಜಿತೇಂದ್ರ ಕುಂದೇಶ್ವರ ಇದ್ದರು.
*ಪ್ರೆಸ್ ಕ್ಲಬ್ ಗೌರವ:*
ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ವತಿಯಿಂದ ರಿಷಿಕಾ ಕುಂದೇಶ್ವರ ಅವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಸಿಎಂ ಮಾಧ್ಯಮ ಕಾರ್ಯದರ್ಶಿ ಕೆ. ವಿ. ಪ್ರಭಾಕರ, ವಸತಿ ಸಚಿವರ ಮಾಧ್ಯಮ ಕಾರ್ಯದರ್ಶಿ ಲಕ್ಷ್ಮಿ ನಾರಾಯಣ, ಬಹುರೂಪಿ ಸಂಸ್ಥೆಯ ಅಧ್ಯಕ್ಷ ಜಿ ಎನ್ ಮೋಹನ್, ಪ್ರಸಿದ್ಧ ಯಕ್ಷಗಾನ ಕಲಾವಿದ ಜಬ್ಬಾರ್ ಸುಮೋ , ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಪ್ರಧಾನ ಕಾರ್ಯದರ್ಶಿ ಲೋಕೇಶ್ ಜಿ., ಪ್ರೆಸ್ ಕ್ಲಬ್ ಅಧ್ಯಕ್ಷ ಶ್ರೀಧರ್, ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಬೆಳ್ಳಿತಟ್ಟೆ, ಪತ್ರಕರ್ತರ ಸಂಘದ ಉಪಾಧ್ಯಕ್ಷ ಭವಾನಿ ಸಿಂಗ್, ಕೋಶಾಧಿಕಾರಿ ವಾಸುದೇವ ಹೊಳ್ಳ ಇದ್ದರು.
*ಕನ್ನಡ ರಾಜ್ಯೋತ್ಸವ ಪ್ರಶಸ್ತಿ:* ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ ಸಭಾಮಂದಿರದಲ್ಲಿ ನಬಿ ರೋಷನ್ ಮತ್ತು ಶಾಫಿಯ ಪ್ರಕಾಶನ ವತಿಯಿಂದ ರಿಷಿಕಾ ಕುಂದೇಶ್ವರ ಅವರನ್ನು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಈ ಸಂದರ್ಭ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ, ಮಾಜಿ ಡಿಐಜಿಪಿ ರಾಜಪ್ಪ ಮತ್ತಿತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು