1:21 AM Friday29 - May 2026
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಆಡಳಿತದ ರಾಜ್ಯದಲ್ಲಿ ಇದ್ದೊಬ್ಬ ಒಬಿಸಿ ಸಿಎಂ ಕೆಳಗಿಳಿಸಿ ಅಪಮಾನ: ಮಂಗಳೂರಿನಲ್ಲಿ ಕೇಂದ್ರ… Kodagu | ಕುಶಾಲನಗರ: 15 ದಿನದೊಳಗೆ ದುಷ್ಕರ್ಮಿಗಳ ಗುಂಡೇಟಿಗೆ 2 ಕಾಡು ಕೋಣಗಳು… ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಭಾರತಕ್ಕೆ ಸಿಹಿಸುದ್ದಿ ಕೊಟ್ಟ ಇರಾನ್; 10 ಇಂಡಿಯನ್ ನಾವಿಕರ… Kerala | ಮಾಜಿ ಸಿಎಂ ಪಿಣರಾಯಿ ಮನೆ ಎದುರು ಇ.ಡಿ ವಾಹನಗಳ ಮೇಲೆ… Bangalore | ಐಪಿಎಲ್ ಬೆಟ್ಟಿಂಗ್ ವಿರುದ್ಧ ಸಿಸಿಬಿ ಭರ್ಜರಿ ಕಾರ್ಯಾಚರಣೆ: 23 ಜನ… ಕಾಂಗ್ರೆಸ್‌ ಹೈಡ್ರಾಮಾಕ್ಕೆ ವಿಜಯೇಂದ್ರ ವ್ಯಂಗ್ಯ: ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದ್ರೂ ಅದು… ಬೆಂಗಳೂರಿಗೆ ಮಹಾಮಾರಿ ಎಬೋಲಾ ಎಂಟ್ರಿ?: ಉಗಾಂಡದ ಮಹಿಳೆ ಐಸೋಲೇಷನ್‌ನಲ್ಲಿ..! ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ 30ರಂದು ಮಂಗಳೂರಿಗೆ: ಧರ್ಮಸ್ಥಳದಲ್ಲಿ ವಾಸ್ತವ್ಯ ಗಂಡನ ಸಾವಿನ ನೋವಿನಲ್ಲೂ ಮಾನವೀಯತೆ ಮೆರೆದ ಗರ್ಭಿಣಿ ಪತ್ನಿ! ಕಿಡ್ನಿ, ಹಾರ್ಟ್ ಮತ್ತು… ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ

ಇತ್ತೀಚಿನ ಸುದ್ದಿ

ಜೀ ಕನ್ನಡ ಡ್ರಾಮಾ ಜೂನಿಯರ್ಸ್ ವಿಜೇತೆ ರಿಷಿಕಾ ಕುಂದೇಶ್ವರಗೆ ಮುಖ್ಯಮಂತ್ರಿ ಮೆಚ್ಚುಗೆ

02/12/2024, 20:20

ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಜೀ ಕನ್ನಡ ಡ್ರಾಮಾ ಜೂನಿಯರ್ಸ್ ವಿಜೇತೆ ರಿಷಿಕಾ ಕುಂದೇಶ್ವರ,ಆಶೀರ್ವಾದ ಪಡೆದರು.

ಮುಖ್ಯಮಂತ್ರಿಗಳ ಮಾಧ್ಯಮ ಕಾರ್ಯದರ್ಶಿ ಕೆ ವಿ ಪ್ರಭಾಕರ ಅವರ ಆಹ್ವಾನದ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭಾನುವಾರ ಭೇಟಿ ಮಾಡಿದರು.
ರಿಷಿಕಾ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿ, ಭವಿಷ್ಯ ಉಜ್ವಲವಾಗಿರಲಿ ಎಂದು ಹಾರೈಸಿದರು.
ಈ ಸಂದರ್ಭದಲ್ಲಿ ಸಿಎಂ ಮಾಧ್ಯಮ ಕಾರ್ಯದರ್ಶಿ ಕೆ ವಿ ಪ್ರಭಾಕರ್, ಜಿತೇಂದ್ರ ಕುಂದೇಶ್ವರ ಇದ್ದರು.
*ಪ್ರೆಸ್ ಕ್ಲಬ್ ಗೌರವ:*
ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ವತಿಯಿಂದ ರಿಷಿಕಾ ಕುಂದೇಶ್ವರ ಅವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಸಿಎಂ ಮಾಧ್ಯಮ ಕಾರ್ಯದರ್ಶಿ ಕೆ. ವಿ. ಪ್ರಭಾಕರ, ವಸತಿ ಸಚಿವರ ಮಾಧ್ಯಮ ಕಾರ್ಯದರ್ಶಿ ಲಕ್ಷ್ಮಿ ನಾರಾಯಣ, ಬಹುರೂಪಿ ಸಂಸ್ಥೆಯ ಅಧ್ಯಕ್ಷ ಜಿ ಎನ್ ಮೋಹನ್, ಪ್ರಸಿದ್ಧ ಯಕ್ಷಗಾನ ಕಲಾವಿದ ಜಬ್ಬಾರ್ ಸುಮೋ , ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಪ್ರಧಾನ ಕಾರ್ಯದರ್ಶಿ ಲೋಕೇಶ್ ಜಿ., ಪ್ರೆಸ್ ಕ್ಲಬ್ ಅಧ್ಯಕ್ಷ ಶ್ರೀಧರ್, ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಬೆಳ್ಳಿತಟ್ಟೆ, ಪತ್ರಕರ್ತರ ಸಂಘದ ಉಪಾಧ್ಯಕ್ಷ ಭವಾನಿ ಸಿಂಗ್, ಕೋಶಾಧಿಕಾರಿ ವಾಸುದೇವ ಹೊಳ್ಳ ಇದ್ದರು.
*ಕನ್ನಡ ರಾಜ್ಯೋತ್ಸವ ಪ್ರಶಸ್ತಿ:* ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ ಸಭಾಮಂದಿರದಲ್ಲಿ ನಬಿ ರೋಷನ್ ಮತ್ತು ಶಾಫಿಯ ಪ್ರಕಾಶನ ವತಿಯಿಂದ ರಿಷಿಕಾ ಕುಂದೇಶ್ವರ ಅವರನ್ನು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಈ ಸಂದರ್ಭ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ, ಮಾಜಿ ಡಿಐಜಿಪಿ ರಾಜಪ್ಪ ಮತ್ತಿತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು