9:14 PM Monday20 - January 2025
ಬ್ರೇಕಿಂಗ್ ನ್ಯೂಸ್
ನಂಗೆ ಯಾರ ಜೊತೆಯೂ ಭಿನ್ನಾಭಿಪ್ರಾಯವಿಲ್ಲ, ಪಕ್ಷಕ್ಕಾಗಿ ತ್ಯಾಗ ಮಾಡಿಕೊಂಡೇ ಬಂದಿದ್ದೇನೆ: ಡಿಸಿಎಂ ಡಿ.ಕೆ.… ಮಹಾತ್ಮ ಗಾಂಧಿ ರಿಯಲ್ ಗಾಂಧಿ, ಸೋನಿಯಾ, ರಾಹುಲ್, ಪ್ರಿಯಾಂಕ ಅವರು ನಕಲಿ ಗಾಂಧಿಗಳು:… ಬೆಂಗಳೂರು ಐಟಿ ಹಬ್, ವ್ಯೂಹಾತ್ಮಕ ನಗರ; ಇಲ್ಲೇ ಐಕ್ಯಾಟ್ ಕೇಂದ್ರ ಖಚಿತ: ಕೇಂದ್ರ… ಮುಡಾ ಕುರಿತು ಇಡಿ ಪತ್ರಿಕಾ ಪ್ರಕಟಣೆ ರಾಜಕೀಯ ಪ್ರೇರಿತ: ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ 5ರ ಹರೆಯದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಸೂಕ್ತ ಕ್ರಮಕ್ಕೆ ಜನವಾದಿ ಮಹಿಳಾ… ಮಂಗಳೂರಿನ ಜನತೆಗೆ ಕಲುಷಿತ ನೀರು ಪೂರೈಕೆ: ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ… ಭಾರತಿ ಏರ್‌ಟೆಲ್ ಮತ್ತು ಬಜಾಜ್ ಫೈನಾನ್ಸ್ ನಿಂದ ಹಣಕಾಸಿನ ಸೇವೆಗಳಿಗಾಗಿ ಅತಿದೊಡ್ಡ ಡಿಜಿಟಲ್… ರಾಜ್ಯದಲ್ಲಿ ಕೃಷಿ ಬಲವರ್ಧನೆ ನೆರವಿಗೆ ಸಚಿವ ಚಲುವರಾಯಸ್ವಾಮಿ ಮನವಿ: ಕೇಂದ್ರ ಸಮ್ಮತಿ ರಸ್ತೆ ಅಪಘಾತದಲ್ಲಿ ಮೃತಪಟ್ಟ ಕೋತಿಗೆ ಗ್ರಾಪಂ ಮಾಜಿ ಅಧ್ಯಕ್ಷರಿಂದ ಅಂತ್ಯ ಸಂಸ್ಕಾರ: ರಾತ್ರಿ… ಜಾತಿಗಣತಿ ವರದಿ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡನೆ: ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ…

ಇತ್ತೀಚಿನ ಸುದ್ದಿ

ಜೀ ಕನ್ನಡ ಡ್ರಾಮಾ ಜೂನಿಯರ್ಸ್ ವಿಜೇತೆ ರಿಷಿಕಾ ಕುಂದೇಶ್ವರಗೆ ಮುಖ್ಯಮಂತ್ರಿ ಮೆಚ್ಚುಗೆ

02/12/2024, 20:20

ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಜೀ ಕನ್ನಡ ಡ್ರಾಮಾ ಜೂನಿಯರ್ಸ್ ವಿಜೇತೆ ರಿಷಿಕಾ ಕುಂದೇಶ್ವರ,ಆಶೀರ್ವಾದ ಪಡೆದರು.

ಮುಖ್ಯಮಂತ್ರಿಗಳ ಮಾಧ್ಯಮ ಕಾರ್ಯದರ್ಶಿ ಕೆ ವಿ ಪ್ರಭಾಕರ ಅವರ ಆಹ್ವಾನದ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭಾನುವಾರ ಭೇಟಿ ಮಾಡಿದರು.
ರಿಷಿಕಾ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿ, ಭವಿಷ್ಯ ಉಜ್ವಲವಾಗಿರಲಿ ಎಂದು ಹಾರೈಸಿದರು.
ಈ ಸಂದರ್ಭದಲ್ಲಿ ಸಿಎಂ ಮಾಧ್ಯಮ ಕಾರ್ಯದರ್ಶಿ ಕೆ ವಿ ಪ್ರಭಾಕರ್, ಜಿತೇಂದ್ರ ಕುಂದೇಶ್ವರ ಇದ್ದರು.
*ಪ್ರೆಸ್ ಕ್ಲಬ್ ಗೌರವ:*
ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ವತಿಯಿಂದ ರಿಷಿಕಾ ಕುಂದೇಶ್ವರ ಅವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಸಿಎಂ ಮಾಧ್ಯಮ ಕಾರ್ಯದರ್ಶಿ ಕೆ. ವಿ. ಪ್ರಭಾಕರ, ವಸತಿ ಸಚಿವರ ಮಾಧ್ಯಮ ಕಾರ್ಯದರ್ಶಿ ಲಕ್ಷ್ಮಿ ನಾರಾಯಣ, ಬಹುರೂಪಿ ಸಂಸ್ಥೆಯ ಅಧ್ಯಕ್ಷ ಜಿ ಎನ್ ಮೋಹನ್, ಪ್ರಸಿದ್ಧ ಯಕ್ಷಗಾನ ಕಲಾವಿದ ಜಬ್ಬಾರ್ ಸುಮೋ , ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಪ್ರಧಾನ ಕಾರ್ಯದರ್ಶಿ ಲೋಕೇಶ್ ಜಿ., ಪ್ರೆಸ್ ಕ್ಲಬ್ ಅಧ್ಯಕ್ಷ ಶ್ರೀಧರ್, ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಬೆಳ್ಳಿತಟ್ಟೆ, ಪತ್ರಕರ್ತರ ಸಂಘದ ಉಪಾಧ್ಯಕ್ಷ ಭವಾನಿ ಸಿಂಗ್, ಕೋಶಾಧಿಕಾರಿ ವಾಸುದೇವ ಹೊಳ್ಳ ಇದ್ದರು.
*ಕನ್ನಡ ರಾಜ್ಯೋತ್ಸವ ಪ್ರಶಸ್ತಿ:* ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ ಸಭಾಮಂದಿರದಲ್ಲಿ ನಬಿ ರೋಷನ್ ಮತ್ತು ಶಾಫಿಯ ಪ್ರಕಾಶನ ವತಿಯಿಂದ ರಿಷಿಕಾ ಕುಂದೇಶ್ವರ ಅವರನ್ನು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಈ ಸಂದರ್ಭ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ, ಮಾಜಿ ಡಿಐಜಿಪಿ ರಾಜಪ್ಪ ಮತ್ತಿತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು