9:52 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಜೀರೋ ಟ್ರಾಫಿಕ್ ಗೆ ಬ್ರೇಕ್; ಇನ್ನೇನಿದ್ದರೂ ಜಂಕ್ಷನ್ ಟು ಜಂಕ್ಷನ್ ಕ್ಲಿಯರೆನ್ಸ್  : ಮುಖ್ಯಮಂತ್ರಿ ಸೂಚನೆ

14/08/2021, 19:30

ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿವಿಐಪಿ ಸಂಸ್ಕೃತಿಗೆ ತಿಲಾಂಜಲಿ ಹಾಡಲು ಒಂದೊಂದು ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ. ಇದೀಗ ಜೀರೋ ಟ್ರಾಫಿಕ್ ನಿಲ್ಲಿಸುವಂತೆ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೋದ್ ಅವರಿಗೆ ಸೂಚನೆ ನೀಡಿದ್ದಾರೆ. ಈ ಕುರಿತು ಆದೇಶ ಕೂಡ ಹೊರಬಿದ್ದಿದೆ.

ರಾಜ್ಯದಲ್ಲಿ  ಮುಖ್ಯಮಂತ್ರಿಯವರು ಎಲ್ಲೇ ಪ್ರಯಾಣ ನಡೆಸಿದರೂ ಇನ್ನು ಮುಂದೆ ಜೀರೋ ಟ್ರಾಫಿಕ್ ವ್ಯವಸ್ಥೆ ಇರುವುದಿಲ್ಲ. ಅದರ ಬದಲಿಗೆ ಕೇವಲ ಜಂಕ್ಷನ್ ಟು ಜಂಕ್ಷನ್ ಕ್ಲಿಯರೆನ್ಸ್ ಇರುತ್ತದೆ.

ಸಮಾಜವಾದಿ ಹಿನ್ನೆಲೆಯಿಂದ ಬಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಆಯ್ಕೆಯಾದ ತಕ್ಷಣ ತಾನು ಸಾಮಾನ್ಯ ಮನುಷ್ಯನಾಗಿ ಇರಲು ಇಚ್ಚಿಸುತ್ತೇನೆ ಎಂದು ತನ್ನ ಅಭಿಪ್ರಾಯವನ್ನು ಮಾಧ್ಯಮ ಮುಂದೆ ಹೇಳಿದ್ದರು. ರಾಜ್ಯ ಹಾಗೂ ಈ ದೇಶದ ಜನತೆ ಬಯಸುವುದು ಕೂಡ ಇದನ್ನೇ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ ತರಹ ಸಿಂಪಲ್ ಸಿಎಂ ಅನ್ನೇ ಜನರು ಲೈಕ್ ಮಾಡುತ್ತಾರೆ.

ಮುಖ್ಯಮಂತ್ರಿ ಬೊಮ್ಮಾಯಿ ಅವರು ಇತ್ತೀಚೆಗೆ ಅವರು ಮಂಗಳೂರಿಗೆ ಆಗಮಿಸಿದಾಗ ಅವರಿಗೆ ಜೀರೋ ಟ್ರಾಫಿಕ್ ಒದಗಿಸಲಾಗಿತ್ತು. ಇದರಿಂದ ಕೊಟ್ಟಾರ ಚೌಕಿಯಿಂದ ಆರಂಭಗೊಂಡು ಕುಳಾಯಿ ವರೆಗೆ ಟ್ರಾಫಿಕ್ ಜಾಮ್ ಉಂಟಾಗಿತ್ತು. ಆ್ಯಂಬುಲೆನ್ಸ್ ಗಳು ಕೂಡ ಇದರಲ್ಲಿ ಸಿಕ್ಕಿ ಹಾಕಿಕೊಂಡಿದ್ದವು.

ಇತ್ತೀಚಿನ ಸುದ್ದಿ

ಜಾಹೀರಾತು