11:11 AM Thursday30 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಜೀರೋ ಟ್ರಾಫಿಕ್ ಗೆ ಬ್ರೇಕ್; ಇನ್ನೇನಿದ್ದರೂ ಜಂಕ್ಷನ್ ಟು ಜಂಕ್ಷನ್ ಕ್ಲಿಯರೆನ್ಸ್  : ಮುಖ್ಯಮಂತ್ರಿ ಸೂಚನೆ

14/08/2021, 19:30

ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿವಿಐಪಿ ಸಂಸ್ಕೃತಿಗೆ ತಿಲಾಂಜಲಿ ಹಾಡಲು ಒಂದೊಂದು ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ. ಇದೀಗ ಜೀರೋ ಟ್ರಾಫಿಕ್ ನಿಲ್ಲಿಸುವಂತೆ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೋದ್ ಅವರಿಗೆ ಸೂಚನೆ ನೀಡಿದ್ದಾರೆ. ಈ ಕುರಿತು ಆದೇಶ ಕೂಡ ಹೊರಬಿದ್ದಿದೆ.

ರಾಜ್ಯದಲ್ಲಿ  ಮುಖ್ಯಮಂತ್ರಿಯವರು ಎಲ್ಲೇ ಪ್ರಯಾಣ ನಡೆಸಿದರೂ ಇನ್ನು ಮುಂದೆ ಜೀರೋ ಟ್ರಾಫಿಕ್ ವ್ಯವಸ್ಥೆ ಇರುವುದಿಲ್ಲ. ಅದರ ಬದಲಿಗೆ ಕೇವಲ ಜಂಕ್ಷನ್ ಟು ಜಂಕ್ಷನ್ ಕ್ಲಿಯರೆನ್ಸ್ ಇರುತ್ತದೆ.

ಸಮಾಜವಾದಿ ಹಿನ್ನೆಲೆಯಿಂದ ಬಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಆಯ್ಕೆಯಾದ ತಕ್ಷಣ ತಾನು ಸಾಮಾನ್ಯ ಮನುಷ್ಯನಾಗಿ ಇರಲು ಇಚ್ಚಿಸುತ್ತೇನೆ ಎಂದು ತನ್ನ ಅಭಿಪ್ರಾಯವನ್ನು ಮಾಧ್ಯಮ ಮುಂದೆ ಹೇಳಿದ್ದರು. ರಾಜ್ಯ ಹಾಗೂ ಈ ದೇಶದ ಜನತೆ ಬಯಸುವುದು ಕೂಡ ಇದನ್ನೇ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ ತರಹ ಸಿಂಪಲ್ ಸಿಎಂ ಅನ್ನೇ ಜನರು ಲೈಕ್ ಮಾಡುತ್ತಾರೆ.

ಮುಖ್ಯಮಂತ್ರಿ ಬೊಮ್ಮಾಯಿ ಅವರು ಇತ್ತೀಚೆಗೆ ಅವರು ಮಂಗಳೂರಿಗೆ ಆಗಮಿಸಿದಾಗ ಅವರಿಗೆ ಜೀರೋ ಟ್ರಾಫಿಕ್ ಒದಗಿಸಲಾಗಿತ್ತು. ಇದರಿಂದ ಕೊಟ್ಟಾರ ಚೌಕಿಯಿಂದ ಆರಂಭಗೊಂಡು ಕುಳಾಯಿ ವರೆಗೆ ಟ್ರಾಫಿಕ್ ಜಾಮ್ ಉಂಟಾಗಿತ್ತು. ಆ್ಯಂಬುಲೆನ್ಸ್ ಗಳು ಕೂಡ ಇದರಲ್ಲಿ ಸಿಕ್ಕಿ ಹಾಕಿಕೊಂಡಿದ್ದವು.

ಇತ್ತೀಚಿನ ಸುದ್ದಿ

ಜಾಹೀರಾತು