2:42 PM Wednesday17 - June 2026
ಬ್ರೇಕಿಂಗ್ ನ್ಯೂಸ್
ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

ಇತ್ತೀಚಿನ ಸುದ್ದಿ

ಭೂಸಂತ್ರಸ್ತರ ಹೋರಾಟ 600ನೇ ದಿನಕ್ಕೆ: ಕುಡತಿನಿ ಪಟ್ಟಣ ಸ್ವಯಂಪ್ರೇರಿತ ಬಂದ್

06/08/2024, 19:08

ಗಣೇಶ ಇನಾಂದಾರ ಬಳ್ಳಾರಿ

info.reporterkarnataka@gmail.com

ಕೈಗಾರಿಕೆ ಉದ್ದೇಶಕ್ಕಾಗಿ ವಶಕ್ಕೆ ಪಡೆಯಲಾದ ಭೂಮಿಗೆ ಪ್ರತಿಯಾಗಿ ನ್ಯಾಯಯುತ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಕುಡತಿನಿ ಭೂಸಂತ್ರಸ್ತ ಹೋರಾಟಗಾರರು ನಡೆಸುತ್ತಿದ್ದ ಪ್ರತಿಭಟನೆಯು 600ನೇ ದಿನ ತಲುಪಿದೆ. ಇದರ ಅಂಗವಾಗಿ ಸಂಘಟನೆಗಳು
ಸ್ವಯಂಪ್ರೇರಿತ ಬಂದ್ ನಡೆಸಿತು.
ಈ ಸಂದರ್ಭದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಉಪಾಧ್ಯಕ್ಷ ಯು. ಬಸವರಾಜ್ ಅವರು ಮಾತನಾಡಿ, ಕೈಗಾರಿಕೆ ಸ್ಥಾಪನೆಗೆ ಮಾಡಲು ಕಂಪನಿಗಳಿಗೆ ಇಲ್ಲಿ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಗಳು ಭಾರಿ ಪ್ರಮಾಣದ ಪರಿಹಾರ ಧನ ನೀಡುತ್ತವೆ. ಒಂದು ಕಂಪನಿಯವರು 40 ಸಾವಿರ ಕೋಟಿ ರೂ.ಬಂಡವಾಳ ಹೂಡಿದರೆ ಅವರಿಗೆ ಸರ್ಕಾರ ಶೇ. 30 ಸಬ್ಸಿಡಿ ನೀಡುತ್ತದೆ. ಅವರಿಗೆ 12 ಸಾವಿರ ಕೋಟಿ ರೂಪಾಯಿಗಳನ್ನು ಸರ್ಕಾರ ಕಂಪನಿಗಳಿಗೆ ನೀಡುತ್ತದೆ. ಆದರೆ ರೈತರಿಗೆ ಒಂದು ಎಕರೆಗೆ 5 ಸಾವಿರ ರೂ. ಪರಿಹಾರ ನೀಡಲು ಸರಕಾರ ಮುಂದಾಗಿಲ್ಲ. ಕಂಪನಿಗಳಿಗೆ ದೊಡ್ಡ ಪ್ರಮಾಣದ ಹಣ ನೀಡುವ ಸರಕಾರದ ಕ್ರಮವನ್ನು
ಖಂಡಿಸಿ ಈ ನಮ್ಮ ಹೋರಾಟವಿದೆ ಎಂದು ತಿಳಿಸಿದರು.
ಕುಡುತಿನಿ ಮತ್ತು ಸುತ್ತಮುತ್ತಲ ಏಳು ಗ್ರಾಮಗಳ 10 ಸಾವಿರಕ್ಕೂ ಹೆಚ್ಚು ಎಕರೆಯನ್ನು ಕೆಐಡಿಬಿ ಮೂಲಕ ಕೈಗಾರಿಕೆಗಳಿಗೆ ಸ್ವಾಧೀನ ಪಡಿಸಿಕೊಂಡು 14 ವರ್ಷ ಕಳೆದರು ಕೈಗಾರಿಕೆಗಳನ್ನು ಈವರೆಗೂ ಆರಂಭಿಸಿಲ್ಲ ಈಗಾದರೂ ಆರಂಭಿಸಬೇಕು.
ಇನ್ನೂ ಸ್ವಾಧೀನ ಪಡಿಸಿಕೊಂಡ ಜಮೀನಿಗೆ ಸುಪ್ರೀಂ ಕೋರ್ಟಿನ ಆದೇಶ ಪ್ರಕಾರ ಪರಿಹಾರ ನೀಡಿಲ್ಲ. ವಶಪಡಿಸಿಕೊಂಡ ಜಮೀನನ್ನು ಅಭಿವೃದ್ಧಿಪಡಿಸಿ ಶೇ. 50ರಷ್ಟು ಜಮೀನು ನೀಡಿ ಎಂದು
ಸರ್ಕಾರಕ್ಕೆ ಪ್ರಸ್ತಾವನೆ ನೀಡಿದೆ. ಆದರೆ ಕಳೆದ 586 ದಿನಗಳಿಂದ ಹೋರಾಟ ಮಾಡುತ್ತಿದ್ದರೂ ಇದಕ್ಕೆ ಸರ್ಕಾರ ಸ್ಪಂದಿಸಿದೆ ಇರುವ ಕಾರಣ ಕುಡತಿನಿ ಬಂದ್ ಹೋರಾಟ ಮಾಡಬೇಕಾಯಿತು ಎಂದು ಹೇಳಿದರು.
ಬಂದ್ ನಿಮತ್ತ ಗ್ರಾಮದಲ್ಲಿ ಅಂಗಡಿ ಮುಗ್ಗಟುಗಳು, ಬ್ಯಾಂಕ್ ಗಳು, ಶಾಲೆ,
ಕಾಲೇಜುಗಳನ್ನು ಬಂದ್ ಮಾಡಲಾಗಿತ್ತು.
ಈ ಸಂದರ್ಭದಲ್ಲಿ ಸಿಐಟಿಯು ನ ಜೆ. ಸತ್ಯಬಾಬು ಭೂಸಂತ್ರಸ್ತರಾದ ತಿಪ್ಪೇಸ್ವಾಮಿ ಜಂಗ್ಲಿ ಸಾಬ್, ಶಿವರಾಂ, ರೇಣುಕಾ ರಾಜ್ ,ದೊಡ್ಡಬಸಪ್ಪ, ಜಾನೇಕುಂಟೆ ಕೊಳಗಲ್ ಗಂಗಾಧರ ಗೌಡ
ಕನ್ನಡಪರ ಸಂಘಗಳು ಮುಖಂಡರು
ಮೊದಲಾದವರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು