10:04 PM Wednesday4 - February 2026
ಬ್ರೇಕಿಂಗ್ ನ್ಯೂಸ್
ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್… ಯಾವ ಹೈಸ್ಪೀಡ್ ರೈಲೂ ಬರಲ್ಲ: ಕೇಂದ್ರ ಬಜೆಟ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್… ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿ; ಶಿಕ್ಷಣ, ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್…

ಇತ್ತೀಚಿನ ಸುದ್ದಿ

ಮೈಸೂರು ವಿಶ್ವವಿದ್ಯಾಲಯ: ಅಂಕಪಟ್ಟಿಗಾಗಿ ವಿದ್ಯಾರ್ಥಿನಿ ಹೋರಾಟ; ರಸ್ತೆಯಲ್ಲಿ ಮಲಗಿ ಪ್ರತಿಭಟನೆ

06/11/2025, 11:00

‘ನಕಲು ಅಂಕಪಟ್ಟಿ ಪಡೆಯಲು ₹18 ಸಾವಿರ ಹಣ ಕೇಳುತ್ತಿದ್ದಾರೆ’ ಎಂದು ಆರೋಪಿಸಿ ಮೈಸೂರು ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ಅಧ್ಯಯನ ವಿಭಾಗದ ಡಿ.ಸಿ.ಪ್ರಭಾ ಕಾಫರ್ಡ್‌ ಭವನದ ಮುಂಭಾಗದ ರಸ್ತೆಯಲ್ಲಿ ಮಲಗಿ ಆಕ್ರೋಶ ವ್ಯಕ್ತಪಡಿಸಿದ್ದು, ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ.
‘ನಾನು ಬಿ.ಇಡಿ ಪ್ರವೇಶ ಪಡೆಯಲು ಬಯಸಿದ್ದೆ. ಅದಕ್ಕಾಗಿ ವಿಶ್ವವಿದ್ಯಾಲಯದಲ್ಲೇ ಉಳಿದಿರುವ ನನ್ನ ಎಸ್ಸೆಸ್ಸೆಲ್ಸಿ ಹಾಗೂ ಪದವಿ ಅಂಕಪಟ್ಟಿ ನೀಡುವಂತೆ ವಿನಂತಿ ಮಾಡಿದ್ದೆ. ಆದರೆ, ಬಾಕಿ ಶುಲ್ಕ ಪಾವತಿಸಿದರೆ ಅಂಕಪಟ್ಟಿ ನೀಡುವಾಗಿ ತಿಳಿಸಿದರು. ನಾನು ಈಗಾಗಲೇ ಬಾಕಿ ಶುಲ್ಕವನ್ನು ಪಾವತಿಸಿದ್ದೇನೆ ಎಂದು ಅದರ ರಸೀದಿ ತೋರಿಸಲು ಸಿದ್ಧಳಿದ್ದರೂ ಅದನ್ನು ಪರಿಶೀಲಿಸಲಿಲ್ಲ. ಅದಕ್ಕಾಗಿ ಪ್ರತಿಭಟನೆ ನಡೆಸಬೇಕಾಯಿತು’ ಎಂದು ವಿದ್ಯಾರ್ಥಿನಿ ತಿಳಿಸಿದ್ದಾರೆ.
ಈ ಸಂಬಂಧ ಪೊಲೀಸರು ವಿದ್ಯಾರ್ಥಿನಿಯನ್ನು ಕರೆದುಕೊಂಡು ವಿವಿಯಲ್ಲಿ ವಿಚಾರಿಸಿ ಮಾಹಿತಿ ಪಡೆದಿದ್ದಾರೆ.
‘ವಿದ್ಯಾರ್ಥಿನಿ 2021ರಲ್ಲೇ ಮಾನಸಗಂಗೋತ್ರಿಯಲ್ಲಿ ರಾಜ್ಯಶಾಸ್ತ್ರ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. ಆದರೆ, ಅನಾರೋಗ್ಯದ ಕಾರಣ ದ್ವಿತೀಯ ವರ್ಷದ ಪ್ರವೇಶ ಶುಲ್ಕವನ್ನು ನಿಧಾನವಾಗಿ ಪಾವತಿಸುತ್ತೇನೆ ಎಂದು ತಿಳಿಸಿದ್ದರು. ಹಾಗಾಗಿ ಪರೀಕ್ಷೆ ಬರೆಯಲು ಅವಕಾಶ ಕೊಡಲಾಗಿತ್ತು ಅಲ್ಲದೆ, ಅವರ ಖಾತೆಗೆ ಸಮಾಜ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿ ವೇತನವು ಜಮೆಯಾಗಿದೆ. ಆ ಹಣದಲ್ಲಿಯೂ ಬಾಕಿ ಪಾವತಿಸಿಲ್ಲ. ಮೂರು ವರ್ಷದ ನಂತರ ಇದೀಗ ಬಂದು ಅಂಕಪಟ್ಟಿ ಕೇಳುತ್ತಿದ್ದಾರೆ. ಬಾಕಿ ಶುಲ್ಕ ಪಾವತಿಸಿದರೆ ಮಾತ್ರ ಅಂಕಪಟ್ಟಿ ನೀಡುವುದಾಗಿ ವಿಭಾಗದವರು ತಿಳಿಸಿದ್ದಾರೆ. ಅದಕ್ಕೆ ಕೋಪಗೊಂಡು ವಿದ್ಯಾರ್ಥಿನಿ ಪ್ರತಿಭಟನೆ ನಡೆಸಿದ್ದಾರೆ’ ಎನ್ನಲಾಗಿದೆ.

ಗಿರಿಧರ್ ಕೊಂಪುಳಿರ ಮೈಸೂರು
info.reporterkarnataka@gmail.com

ಇತ್ತೀಚಿನ ಸುದ್ದಿ

ಜಾಹೀರಾತು