12:16 PM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಮೈಸೂರು ವಿಶ್ವವಿದ್ಯಾಲಯ: ಅಂಕಪಟ್ಟಿಗಾಗಿ ವಿದ್ಯಾರ್ಥಿನಿ ಹೋರಾಟ; ರಸ್ತೆಯಲ್ಲಿ ಮಲಗಿ ಪ್ರತಿಭಟನೆ

06/11/2025, 11:00

‘ನಕಲು ಅಂಕಪಟ್ಟಿ ಪಡೆಯಲು ₹18 ಸಾವಿರ ಹಣ ಕೇಳುತ್ತಿದ್ದಾರೆ’ ಎಂದು ಆರೋಪಿಸಿ ಮೈಸೂರು ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ಅಧ್ಯಯನ ವಿಭಾಗದ ಡಿ.ಸಿ.ಪ್ರಭಾ ಕಾಫರ್ಡ್‌ ಭವನದ ಮುಂಭಾಗದ ರಸ್ತೆಯಲ್ಲಿ ಮಲಗಿ ಆಕ್ರೋಶ ವ್ಯಕ್ತಪಡಿಸಿದ್ದು, ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ.
‘ನಾನು ಬಿ.ಇಡಿ ಪ್ರವೇಶ ಪಡೆಯಲು ಬಯಸಿದ್ದೆ. ಅದಕ್ಕಾಗಿ ವಿಶ್ವವಿದ್ಯಾಲಯದಲ್ಲೇ ಉಳಿದಿರುವ ನನ್ನ ಎಸ್ಸೆಸ್ಸೆಲ್ಸಿ ಹಾಗೂ ಪದವಿ ಅಂಕಪಟ್ಟಿ ನೀಡುವಂತೆ ವಿನಂತಿ ಮಾಡಿದ್ದೆ. ಆದರೆ, ಬಾಕಿ ಶುಲ್ಕ ಪಾವತಿಸಿದರೆ ಅಂಕಪಟ್ಟಿ ನೀಡುವಾಗಿ ತಿಳಿಸಿದರು. ನಾನು ಈಗಾಗಲೇ ಬಾಕಿ ಶುಲ್ಕವನ್ನು ಪಾವತಿಸಿದ್ದೇನೆ ಎಂದು ಅದರ ರಸೀದಿ ತೋರಿಸಲು ಸಿದ್ಧಳಿದ್ದರೂ ಅದನ್ನು ಪರಿಶೀಲಿಸಲಿಲ್ಲ. ಅದಕ್ಕಾಗಿ ಪ್ರತಿಭಟನೆ ನಡೆಸಬೇಕಾಯಿತು’ ಎಂದು ವಿದ್ಯಾರ್ಥಿನಿ ತಿಳಿಸಿದ್ದಾರೆ.
ಈ ಸಂಬಂಧ ಪೊಲೀಸರು ವಿದ್ಯಾರ್ಥಿನಿಯನ್ನು ಕರೆದುಕೊಂಡು ವಿವಿಯಲ್ಲಿ ವಿಚಾರಿಸಿ ಮಾಹಿತಿ ಪಡೆದಿದ್ದಾರೆ.
‘ವಿದ್ಯಾರ್ಥಿನಿ 2021ರಲ್ಲೇ ಮಾನಸಗಂಗೋತ್ರಿಯಲ್ಲಿ ರಾಜ್ಯಶಾಸ್ತ್ರ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. ಆದರೆ, ಅನಾರೋಗ್ಯದ ಕಾರಣ ದ್ವಿತೀಯ ವರ್ಷದ ಪ್ರವೇಶ ಶುಲ್ಕವನ್ನು ನಿಧಾನವಾಗಿ ಪಾವತಿಸುತ್ತೇನೆ ಎಂದು ತಿಳಿಸಿದ್ದರು. ಹಾಗಾಗಿ ಪರೀಕ್ಷೆ ಬರೆಯಲು ಅವಕಾಶ ಕೊಡಲಾಗಿತ್ತು ಅಲ್ಲದೆ, ಅವರ ಖಾತೆಗೆ ಸಮಾಜ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿ ವೇತನವು ಜಮೆಯಾಗಿದೆ. ಆ ಹಣದಲ್ಲಿಯೂ ಬಾಕಿ ಪಾವತಿಸಿಲ್ಲ. ಮೂರು ವರ್ಷದ ನಂತರ ಇದೀಗ ಬಂದು ಅಂಕಪಟ್ಟಿ ಕೇಳುತ್ತಿದ್ದಾರೆ. ಬಾಕಿ ಶುಲ್ಕ ಪಾವತಿಸಿದರೆ ಮಾತ್ರ ಅಂಕಪಟ್ಟಿ ನೀಡುವುದಾಗಿ ವಿಭಾಗದವರು ತಿಳಿಸಿದ್ದಾರೆ. ಅದಕ್ಕೆ ಕೋಪಗೊಂಡು ವಿದ್ಯಾರ್ಥಿನಿ ಪ್ರತಿಭಟನೆ ನಡೆಸಿದ್ದಾರೆ’ ಎನ್ನಲಾಗಿದೆ.

ಗಿರಿಧರ್ ಕೊಂಪುಳಿರ ಮೈಸೂರು
info.reporterkarnataka@gmail.com

ಇತ್ತೀಚಿನ ಸುದ್ದಿ

ಜಾಹೀರಾತು