8:43 PM Thursday5 - March 2026
ಬ್ರೇಕಿಂಗ್ ನ್ಯೂಸ್
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ…

ಇತ್ತೀಚಿನ ಸುದ್ದಿ

ರೋಹನ್ ಕಾರ್ಪೋರೇಷನ್ ಕನಸಿನ ಕಟ್ಟಡದೊಂದಿಗೆ ಕನಸಿನ ಭಾರತ ನಿರ್ಮಾಣ

16/08/2024, 11:41

ಮಂಗಳೂರು(reporterkarnataka.com): 78ನೇ ಸ್ವಾತಂತ್ರ ದಿನವನ್ನು ರೋಹನ್ ಕಾರ್ಪೋರೇಷನ್ ಆವರಣದಲ್ಲಿ ಸಂಭ್ರಮದಿಂದ ಆಚರಿಸಲಾಯಿತು.
ಧ್ವಜಾರೋಹಣ ಮಾಡಿದ ನಂತರ ಮಾತನಾಡಿದ ಕಾರ್ಮಿಕ ಅಧಿಕಾರಿ ವಿಲ್ಮಾ “ಕನಸಿನ ಕಟ್ಟಡದ ರೋಹನ್ ಕಾರ್ಪೊರೇಷನ್ ಜೊತೆ ಸೇರಿ ಹೊಸ ಭಾರತ ನಿರ್ಮಾಣ ಮಾಡೋಣ, ಕಾರ್ಮಿಕರಿಲ್ಲದೆ ನಮಗೆ ಸೂರಿಲ್ಲ. ನಿಮ್ಮ ನಡುವಿನ ಸ್ವಾತಂತ್ರೋತ್ಸವ ನಿಜಕ್ಕೂ ನೆನಪಿನ ಬುತ್ತಿ’, ಎಂದರು.


ಸ್ವಾತಂತ್ರೋತ್ಸವದ ಕುರಿತಾಗಿ ಮಾತನಾಡಿದ ಕಾರ್ಮಿಕ ಅಧಿಕಾರಿ ಕುಮಾರ್ “ಕಾರ್ಮಿಕರಿಗೆ ಇಂದು ರಜೆ ಘೋಷಣೆ ಮಾಡಿದ್ದೇವೆ, ಸ್ವಾತಂತ್ರಕ್ಕಾಗಿ ಮುಡಿಪಿರುವ ಈ ದಿನವನ್ನು ಕಾರ್ಮಿಕರು ಸ್ವತಂತ್ರವಾಗಿ ಆಚರಿಸಿ” ಎಂದು ಹೇಳಿದರು.
ರೋಹನ್ ಕಾರ್ಪೊರೇಶನ್‌ನ ದೈನಂದಿನ ಕಾರ್ಯಗಳಲ್ಲಿ ಒಗ್ಗಟ್ಟಿನ ಮೌಲ್ಯಗಳನ್ನು ಸಾಕಾರಗೊಳಿಸಿ, ವಿವಿಧತೆಯಲ್ಲಿನ ಏಕತೆಯನ್ನು ಗೌರವಿಸಿ ಪ್ರಗತಿಯತ್ತ ನಿರಂತರವಾಗಿ ಕೆಲಸ ಸಾಗಲಿ. ನಮ್ಮ ದೇಶವನ್ನು ಮತ್ತು ಸಂಸ್ಥೆಯನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುತ್ತೇವೆ ಎಂದು ಪ್ರತಿಜ್ಞೆ ಮಾಡಿ. ಮುಂದಿನ ಪೀಳಿಗೆಗಳು ಹೆಮ್ಮೆಪಡುವಂತಹ ಭವಿಷ್ಯವನ್ನು ರಚಿಸುವಲ್ಲಿ ಒಂದಾಗೋಣ. ಎಂಬ ಆಶಯದೊಂದಿಗೆ ರೋಹನ್ ಕಾರ್ಪೊರೇಷನ್ ಕಾರ್ಯಕ್ರಮ ಯಶಸ್ವಿ ಕಂಡಿತು.
ಕಾರ್ಯಕ್ರಮದಲ್ಲಿ ರೋಹನ್ ಕಾರ್ಪೊರೇಷನ್ ನ ಸದಸ್ಯರು ಹಾಗೂ ಕಾರ್ಮಿಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು