6:33 PM Saturday27 - June 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್…

ಇತ್ತೀಚಿನ ಸುದ್ದಿ

ಸಂಸದ ಬಿ. ವೈ ರಾಘವೇಂದ್ರ ಜನ್ಮದಿನ: ಆಸ್ಪತ್ರೆ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

16/08/2024, 22:28

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಅವರ ಜನ್ಮದಿನದ ಪ್ರಯುಕ್ತ ತೀರ್ಥಹಳ್ಳಿ ಬಿಜೆಪಿ ಯುವ ಮೋರ್ಚಾ ವತಿಯಿಂದ ತಾಲೂಕು ಜಯಚಾಮರಾಜೇಂದ್ರ ಆಸ್ಪತ್ರೆಯ ಒಳ ರೋಗಿಗಳಿಗೆ ಹಣ್ಣು ಮತ್ತು ಹಂಪಲು ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷ ಕುಕ್ಕೆ ಪ್ರಶಾಂತ್, ಬಿ. ವೈ. ರಾಘವೇಂದ್ರರವರು ಯುವ ಮುಖಂಡರಾಗಿ ಸಂಘಟನೆ ಮತ್ತು ಕೆಲಸದಲ್ಲಿ ರಾಜ್ಯಕ್ಕೆ
ಮಾದರಿಯಾಗಿರುವ ನಾಯಕ, ಅವರ ಜನ್ಮದಿನದ ಪ್ರಯುಕ್ತ ಆಸ್ಪತ್ರೆಯ ಒಳ ರೋಗಿಗಳಿಗೆ ಹಣ್ಣು ಹಾಗೂ ಹಂಪಲು ವಿತರಣೆ ಮಾಡುತ್ತಿದ್ದೇವೆ. ಅವರು ತಮ್ಮ ಕೆಲಸಗಳ ಮೂಲಕ ರಾಜ್ಯಾದ್ಯಂತ ಮನೆ ಮಾತಾಗಿದ್ದಾರೆ. ಇನ್ನಷ್ಟು ಕೆಲಸ ಮಾಡುವ ಶಕ್ತಿ ಭಗವಂತ ನೀಡಲಿ ಎಂದು ಹಾರೈಸಿದರು.


ತಾಲೂಕು ಮಂಡಲ ಬಿಜೆಪಿ ಅಧ್ಯಕ್ಷರಾದ ನವೀನ್ ಹೆದ್ದೂರ್ ಮಾತನಾಡಿ ಸಂಸದರ ಜನ್ಮದಿನದ ಪ್ರಯುಕ್ತ ಆಸ್ಪತ್ರೆಯ ಒಳ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡುತ್ತಿದ್ದೇವೆ. ಸಂಸದರು ನಮ್ಮ ಕ್ಷೇತ್ರಕ್ಕೆ, ತಾಲೂಕಿಗೆ ಮಾತ್ರವಲ್ಲದೆ ಜಿಲ್ಲೆಗೆ ಆಸ್ತಿ ಇದ್ದಂತೆ. ಅವರ ಜನ್ಮದಿನ ವಿಶೇಷವಾಗಿರಲಿ ಎಂಬ ಕಾರಣದಿಂದ ಹೀಗೆ ಮಾಡುತ್ತಿದ್ದೇವೆ ಎಂದರು.
ಈ ಸಂದರ್ಭದಲ್ಲಿ ಮಧುರಾಜ್ ಹೆಗ್ಡೆ, ಚಂದವಳ್ಳಿ ಸೋಮಶೇಖರ್, ರಕ್ಷಿತ್ ಮೇಗರವಳ್ಳಿ,
ವಿನುತ್ ಗೌಡ, ಪ್ರಮೋದ್ ಪಮ್ಮ, ಅನೂಪ್ ಉಪಾಧ್ಯ ಸೇರಿದಂತೆ ಹಲವರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು